ಪಶ್ಚಿಮ ಬಂಗಾಳದ ರಾಜಕಾರಣದಲ್ಲಿ ಮತ್ತೊಮ್ಮೆ ಮಹತ್ವದ ಬೆಳವಣಿಗೆ ನಡೆದಿದೆ. ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಬಂಡಾಯ ಉಂಟಾದ ಹಿನ್ನೆಲೆಯಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಭಾರಿ ಕ್ರಮ ಜರುಗಿಸಿದ್ದಾರೆ. ಟಿಎಂಸಿ ನಾಯಕಿ ಮಮತಾ ಬ್ಯಾನರ್ಜಿ ಅವರನ್ನು ಟಿಎಂಸಿ ಮುಖ್ಯಸ್ಥರ ಹುದ್ದೆಯಿಂದ ತೆಗೆದುಹಾಕಲು ಯತ್ನಿಸಿದ ಹಾಗೂ ಪಕ್ಷ ವಿರೋಧಿ ಚಟುವಟಿಕೆಗಳಲ್ಲಿ ತೊಡಗಿದ ಆರೋಪದ ಮೇಲೆ ಹಿರಿಯ ನಾಯಕ ಫಿರ್ಹಾದ್ ಹಕೀಮ್, ಅರೂಪ್ ರಾಯ್ ಮತ್ತು ಇತರ 8 ಬಂಡಾಯ ಶಾಸಕರನ್ನು ಮಮತಾ ಬ್ಯಾನರ್ಜಿ ಪಕ್ಷದಿಂದ ಉಚ್ಛಾಟಿಸಿದ್ದಾರೆ.







